Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:29
17 ತಿಳಿವುಗಳ ಹೋಲಿಕೆ  

ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.


ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.


ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.


ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.


ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು