Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಸುಟ್ಟು ಹೋಗಿವೆ; ನಿಮ್ಮ ಭೂವಿುಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ; ಅನ್ಯದೇಶಗಳು ನಾಶನವಾದಂತೆಯೇ ನಿಮ್ಮ ಭೂವಿುಯೂ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:7
37 ತಿಳಿವುಗಳ ಹೋಲಿಕೆ  

ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,


ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.


ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.


ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.


ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.


ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.


ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು