Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:13
31 ತಿಳಿವುಗಳ ಹೋಲಿಕೆ  

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.


ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.


ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.


ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?


ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.


ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.


“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’


ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.


ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು