Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:20
25 ತಿಳಿವುಗಳ ಹೋಲಿಕೆ  

ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?


ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.


ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.


ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.


ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.


ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.


ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು