Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಕೋಬ ಮನೆತನದವರಲ್ಲಿ ಅಳಿದುಳಿದ ಕೆಲವರು ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜನಶೇಷವು, ಅಂದರೆ ಯಾಕೋಬ್ಯರಲ್ಲಿ ಉಳಿದದ್ದು, ಪರಾಕ್ರವಿುಯಾದ ದೇವರ ಕಡೆಗೆ ತಿರುಗಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:21
17 ತಿಳಿವುಗಳ ಹೋಲಿಕೆ  

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,


ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.


ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.


ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.


“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು