Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇದೇ ದಿವಸ [ಶತ್ರುಗಳು] ನೋಬಿನಲ್ಲಿ ಬೀಡುಗೊಳ್ಳುವರು; ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇವಿುನ ಬೆಟ್ಟದ ಕಡೆಗೆ, ಕೈ ಬೀಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:32
21 ತಿಳಿವುಗಳ ಹೋಲಿಕೆ  

ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.


“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.


ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.


ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.


ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.


ಅನಾತೋತ್, ನೋಬ್, ಅನನ್ಯ,


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.


ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.


ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.


ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.


ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.


ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”


ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು