Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 12:3
16 ತಿಳಿವುಗಳ ಹೋಲಿಕೆ  

ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.


ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.


ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು