Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 12:5
16 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು