Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾಜ್ಯಗಳಿಗೆ ಶಿರೋರತ್ನವೂ ಕಸ್ದೀಯರ ಮಹಿಮೆಗೆ ಭೂಷಣವೂ ಆದ ಬಾಬೆಲಿಗೆ ದೇವರು ಕೆಡವಿದ ಸೊದೋಮ್ ಗೊಮೋರಗಳ ಗತಿಯು ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:19
23 ತಿಳಿವುಗಳ ಹೋಲಿಕೆ  

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!


ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.


“ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,


ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.


ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು