Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:2
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು