Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದು ಎಂದಿಗೂ ನಿವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು; ಯಾವ ಅರಬಿಯನೂ ಗುಡಾರಹಾಕನು; ಕುರುಬರು ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:20
20 ತಿಳಿವುಗಳ ಹೋಲಿಕೆ  

ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.


ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.


ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.


ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”


ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.


ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.


ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು