Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:6
39 ತಿಳಿವುಗಳ ಹೋಲಿಕೆ  

ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.


ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.


ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”


“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.


ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,


ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.


ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.


ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.


ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು