Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:12
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.


ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.


ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.


ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು