Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:24
30 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.


ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.


ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.


ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು