Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:29
27 ತಿಳಿವುಗಳ ಹೋಲಿಕೆ  

ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.


ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.


ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.


ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.


ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,


ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.


ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು