Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋವಾಬಿನ ವಿಷಯವಾದ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತಲ್ಲಾ! ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:1
20 ತಿಳಿವುಗಳ ಹೋಲಿಕೆ  

ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.


ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.


ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:


ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.


“ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.


ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.


ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.


ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”


ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು