Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:5
23 ತಿಳಿವುಗಳ ಹೋಲಿಕೆ  

ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.


ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.


ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.


ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.


ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು