Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:12
24 ತಿಳಿವುಗಳ ಹೋಲಿಕೆ  

ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.


ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.


“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.


ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು