Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, ನಾಶನವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ, ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತುಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲಾತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಡಿ ಹಿಂಸಿಸುವವರು [ನಿಮ್ಮ] ದೇಶದಿಂದ ನಿರ್ಮೂಲರಾದರು, ಬಲಾತ್ಕಾರವು ತೀರಿತು, ತುಳಿದುಬಿಡುವವರು ಮುಗಿದುಹೋದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:4
22 ತಿಳಿವುಗಳ ಹೋಲಿಕೆ  

ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!


ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.


ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.


ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.


ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ


ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು