Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಮೋವಾಬಿನ ನಿವಿುತ್ತ ಮೋವಾಬೇ ಗೋಳಾಡುವದು; ಪ್ರತಿಯೊಬ್ಬನೂ ಪ್ರಲಾಪಿಸುವನು; ಮುರಿದು ಹೋದವರಾಗಿ ನೀವು ಕೀರ್ ಹರೆಷೆಥಿನ ದೀಪದ್ರಾಕ್ಷೆಯು ಹಾಳಾಯಿತಲ್ಲಾ ಎಂದು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:7
8 ತಿಳಿವುಗಳ ಹೋಲಿಕೆ  

ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.


ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.


ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?


ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.


ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.


ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು