Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಆ ದಿನದಂದು ಇಸ್ರಯೇಲಿನ ಕೊಬ್ಬು ಕರಗುವುದು. ಅದರ ಮಹಿಮೆ ಕ್ಷಯಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಿನದಲ್ಲಿ ಯಾಕೋಬಿನ ಮಾಂಸದ ಕೊಬ್ಬು ಕರಗಿ ಅದರ ಮಹಿಮೆಯು ಕ್ಷೀಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:4
15 ತಿಳಿವುಗಳ ಹೋಲಿಕೆ  

ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.


ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು