Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ದಿನದಲ್ಲಿ ಜನರು ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆಯೂ ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸದೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:7
21 ತಿಳಿವುಗಳ ಹೋಲಿಕೆ  

ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು