Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:2
14 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.


‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”


ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.


ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು