Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:1
36 ತಿಳಿವುಗಳ ಹೋಲಿಕೆ  

ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.


ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು