Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿನ ಅರಸನೇ, ನಿನ್ನ ವಿದ್ವಾಂಸರೆಲ್ಲಿ? ಅವರೇ ನಿನಗೆ ತಿಳುವಳಿಕೆ ಕೊಡಲಿ. ಈಜಿಪ್ಟಿನ ವಿರೋಧವಾಗಿ ಸೇನಾಧೀಶ್ವರ ಸರ್ವೇಶ್ವರ ಯೋಚಿಸಿರುವುದನ್ನು ಅವರೇ ನಿನಗೆ ತಿಳಿಯಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ನಿನಗೆ ತಿಳಿಯ ಹೇಳಲಿ, ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅರಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಜಿಪ್ಟೇ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿನಗೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:12
13 ತಿಳಿವುಗಳ ಹೋಲಿಕೆ  

ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?


ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.


ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು