Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:21
30 ತಿಳಿವುಗಳ ಹೋಲಿಕೆ  

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.


ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು