Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ದೂಳಿನಲ್ಲಿ ಅವುತುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:10
22 ತಿಳಿವುಗಳ ಹೋಲಿಕೆ  

ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.


ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.


ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.


ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.


“ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.


ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು