Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:3
16 ತಿಳಿವುಗಳ ಹೋಲಿಕೆ  

ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.


ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”


ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.


ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.


“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.


ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.


ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು