Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ - ನಡೆ, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:15
12 ತಿಳಿವುಗಳ ಹೋಲಿಕೆ  

ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.


ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.


ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.


ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,


ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.


ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.


ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು