Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಕಾಲದಲ್ಲಿ ತೂರ್‍ಪಟ್ಟಣವು ಒಬ್ಬ ರಾಜನ ಆಡಳಿತದ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷದ ಮೇಲೆ ಸೂಳೆಯ ವಿಷಯವಾದ ಗೀತದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:15
13 ತಿಳಿವುಗಳ ಹೋಲಿಕೆ  

ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,


ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.


“‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.


ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.


ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.


ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು