Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಟ್ಟಣದಲ್ಲಿ ಹಾಳೇ ಉಳಿದಿದೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:12
12 ತಿಳಿವುಗಳ ಹೋಲಿಕೆ  

ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.


ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.


“ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು