5 ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
“‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.
ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.
ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.