Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:1
41 ತಿಳಿವುಗಳ ಹೋಲಿಕೆ  

ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.


ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.


ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.


ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.


ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.


ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.


ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.


ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು