Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಮೇಘವು] ಒಣನೆಲದ ಕಾವನ್ನು ಆರಿಸುವಂತೆ ನೀನು ಅನ್ಯರ ಗದ್ದಲವನ್ನು ಅಣಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಭೀಕರರ ಉತ್ಸಾಹಗಾನವು ನಿಂತುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ. ಆ ಭಯಂಕರ ಶತ್ರುವು ಯುದ್ಧಕ್ಕೆ ಬಾ ಎಂದು ಸವಾಲು ಹಾಕುತ್ತಾನೆ. ಆದರೆ ದೇವರೇ, ನೀನು ಅವನನ್ನು ತಡೆಯುವೆ. ಬೇಸಿಗೆ ಕಾಲದಲ್ಲಿ ಮರುಭೂಮಿಯಲ್ಲಿರುವ ಸಸಿಗಳು ಬಾಡಿಹೋಗಿ ನೆಲದ ಮೇಲೆ ಬಿದ್ದುಹೋಗುವವು. ಅದೇ ರೀತಿಯಲ್ಲಿ ನೀನು ವೈರಿಯನ್ನು ಸೋಲಿಸಿ ಅವನು ಮೊಣಕಾಲೂರುವಂತೆ ಮಾಡುವೆ. ಕಾರ್ಮುಗಿಲು ಬೇಸಿಗೆಯ ತಾಪವನ್ನು ನಿವಾರಿಸುವದು. ಅದೇ ರೀತಿಯಲ್ಲಿ ನೀನು ಶತ್ರುವಿನ ಆರ್ಭಟವನ್ನು ನಿಲ್ಲಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ, ನೀವು ವಿದೇಶಿಯರ ಗದ್ದಲವನ್ನು ಅಡಗಿಸುವಿರಿ; ಮೋಡದ ನೆರಳಿನಿಂದ ಬಿಸಿಲು ತಡೆಯುವ ಹಾಗೆಯೇ, ನೀವು ಕ್ರೂರಿಗಳ ಉತ್ಸಾಹಗಾನವನ್ನು ನಿಲ್ಲಿಸಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:5
27 ತಿಳಿವುಗಳ ಹೋಲಿಕೆ  

ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.


ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು