Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:21
28 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.


ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.


“ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.


ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು