Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:19
26 ತಿಳಿವುಗಳ ಹೋಲಿಕೆ  

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.


ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.


ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.


ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.


ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.


ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.


ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.


ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.


ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು