Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:26
13 ತಿಳಿವುಗಳ ಹೋಲಿಕೆ  

ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.


ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!


ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.


ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?


ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?


ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?


ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು