Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:6
22 ತಿಳಿವುಗಳ ಹೋಲಿಕೆ  

“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು


ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು