Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:14
24 ತಿಳಿವುಗಳ ಹೋಲಿಕೆ  

ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.


ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು