Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:17
24 ತಿಳಿವುಗಳ ಹೋಲಿಕೆ  

ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.


ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.


“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.


ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”


ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,


ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,


ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು