Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:20
24 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.


ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.


ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.


ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.


“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು