Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:10
28 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.


ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.


ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.


ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.


ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.


ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು