Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:14
34 ತಿಳಿವುಗಳ ಹೋಲಿಕೆ  

ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.


ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.


“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.


ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.


ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.


ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.


ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.


ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.


ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.


ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,


ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.


ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು