Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:15
17 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;


“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”


ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.


ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.


ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.


ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು