Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:5
28 ತಿಳಿವುಗಳ ಹೋಲಿಕೆ  

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.


ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.


“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.


ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು