Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು; ಐವರು ಬೆದರಿಸುವದರಿಂದ ನೀವು ಓಡಿ ಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಗಣ ಕಂಬದಂತೆಯೂ [ಒಂಟಿಯಾಗಿ] ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:17
20 ತಿಳಿವುಗಳ ಹೋಲಿಕೆ  

ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು