Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:23
33 ತಿಳಿವುಗಳ ಹೋಲಿಕೆ  

ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.


ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.


ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.


“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.


ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು