Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿದ ಅಸ್ಸೀರಿಯಾದವರು ದಿಗ್ಬ್ರಮೆಗೊಳ್ಳುವರು. ರಾಜದಂಡದ ಶಿಕ್ಷೆಯನ್ನು ಸವಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನ ಸ್ವರವನ್ನು ಕೇಳುವಾಗ ಅಶ್ಶೂರವು ನಡುಗುವದು. ಆತನು ಕೋಲಿನಿಂದ ಅಶ್ಶೂರವನ್ನು ಹೊಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರು ದಂಡದಿಂದ ದಂಡಿಸುವಾಗ, ಅಸ್ಸೀರಿಯವು ಆತನ ಧ್ವನಿಯಿಂದಲೇ ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:31
15 ತಿಳಿವುಗಳ ಹೋಲಿಕೆ  

ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.


ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು