Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:7
20 ತಿಳಿವುಗಳ ಹೋಲಿಕೆ  

ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.


“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.


ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”


“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು