Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:8
22 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!


ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.


ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.


ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.


“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.


ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು